Breaking News
Featured Video Play Icon

ಮಿನಿವಿಧಾನಸೌಧಕ್ಕೆ ಸಚಿವ ಕೃಷ್ಣ ಭೈರೇಗೌಡ ಭೇಟಿ: ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸಚಿವ…

ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹುಬ್ಬಳ್ಳಿಯ ಗ್ರಾಮೀಣ ಹಾಗೂ ನಗರ ತಹಶಿಲ್ದಾರರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಹೌದು.. ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸಚಿವರು ತಾಲೂಕಿನ ಆಡಳಿತ ಹಾಗೂ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲನೆ ನಡೆಸಲು ಮುಂದಾಗಿದ್ದು, ಕಲಘಟಗಿ ತಾಲೂಕಿನ ಸರ್ಕಾರಿ ಕಚೇರಿಯ

ಭೇಟಿಯ ಬಳಿಕ ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಆಗಮಿಸಿ ತಾಲೂಕಾಡಳಿತದ ಕಾರ್ಯವೈಖರಿ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಇನ್ನೂ ತಹಶಿಲ್ದಾರರಾದ ಕಲಗೌಡ ಪಾಟೀಲ ಹಾಗೂ ಪ್ರಕಾಶ ನಾಶಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇ-ಆಫೀಸ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗೆ ಸೂಕ್ತ ಟ್ರೇನಿಂಗ್ ನೀಡದೇ ಇರುವ ಹಿನ್ನೆಲೆಯಲ್ಲಿ ದಾಖಲೆಗಳು ತಿಂಗಳುಗಟ್ಟಲೆ ಕಚೇರಿಯಲ್ಲಿಯೇ ಕೊಳೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಲಕರಣೆಗಳ ಕೊರತೆಯ ಬಗ್ಗೆ ಸಮಜಾಯಿಷಿ ನೀಡಲು ಬಂದಿದ್ದ ತಹಶಿಲ್ದಾರರನ್ನು ಸಚಿವ ಕೃಷ್ಣ ಭೈರೇಗೌಡ ತರಾಟೆಗೆ ತೆಗೆದುಕೊಂಡಿದ್ದು, ಕೂಡಲೇ ಆನ್ ಲೈನ್ ವ್ಯವಸ್ಥೆ ಅನುಷ್ಠಾನಕ್ಕೆ ಆಗ್ರಹಿಸಿದರು.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *