ಬೆಂಗಳೂರು: ಯಲಹಂಕದಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ ಮಾಡಿದ ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಒತ್ತಾಯಿಸಿದರು. ಯಲಹಂಕದಲ್ಲಿ ಸಚಿವರಿಂದ ದೌರ್ಜನ್ಯಕ್ಕೊಳಗಾದ ದಲಿತ ಮಹಿಳೆ ಮುನಿಯಮ್ಮರನ್ನು ಬಿಜೆಪಿ ನಿಯೋಗವು ಇಂದು ಭೇಟಿ ಮಾಡಿತು. ಕುಟುಂಬದ ಅಹವಾಲು ಆಲಿಸಿತು. ನಂತರ ಮಾತನಾಡಿದ ಮಾಜಿ ಡಿಸಿಎಂ ಕಾರಜೋಳ, ದಲಿತರ ಆಸ್ತಿ ಕಬಳಿಕೆಗೆ ಸಚಿವರೇ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಸ್ವಾತಂತ್ರ್ಯೋತ್ತರದ 75 ವರ್ಷಗಳ ಆಡಳಿತದಲ್ಲಿ ಇದೊಂದು ಕಪ್ಪುಚುಕ್ಕೆ ಎಂದು ಆರೋಪಿಸಿದರು.
ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು. ದಲಿತರ ಆಸ್ತಿ ಕಬಳಿಸಿ ದೌರ್ಜನ್ಯ ಮಾಡಿದ್ದು ಖಂಡನೀಯ. ರಸ್ತೆಗಳನ್ನು ಬಂದ್ ಮಾಡಿದ್ದು ಆಕ್ಷೇಪಾರ್ಹ. ಈ ಸರಕಾರ ದಲಿತರನ್ನು ರಕ್ಷಿಸಲು ಬಂದಿದೆಯೇ ಅಥವಾ ದೌರ್ಜನ್ಯ ಮಾಡಲು ಬಂದಿದೆಯೇ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. ಒಳಗೆ ಸೇರಿಕೊಂಡ ಗೂಂಡಾಗಳನ್ನು ಬಂಧಿಸಿ ಸಂತ್ರಸ್ತರಿಗೆ ರಕ್ಷಣೆ ಕೊಡಿಸಲು ಅವರು ಒತ್ತಾಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news




