ಬೆಂಗಳೂರು: ಭಗವದ್ಗೀತೆಯನ್ನು ಮೊದಲು ಬರೆದಿದ್ದು ಹಾಗೂ ಮಹಾಭಾರತವನ್ನು ಮಟ್ಟ ಮೊದಲಬಾರಿಗೆ ಲಿಪಿಬದ್ಧಗೊಳಿಸಿದ್ದು ಗಣಪತಿ ಎಂದು ಪುತ್ತಿಗೆಮಠದ ಸುಗುಣೇಂದ್ರ ತೀರ್ಥರು ತಿಳಿಸಿದರು. ಜೋಶಿ ಸಂಗೀತ ನೃತ್ಯ ನಾಟಕ ಶಾಲೆಯ ವತಿಯಿಂದ ಆಯೋಜಿಸಲಾಗಿದ್ದ ಮಣ್ಣಿನ ಗಣಪ ಮಾಡುವ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ನಾವೆಲ್ಲರೂ ಮಣ್ಣಿನ ಗಣಪತಿಯನ್ನು ನಿರ್ಮಾಣ ಮಾಡುತ್ತಿದ್ದೇವೆ. ಅದರ ಜೊತೆಗೆ ಕೋಟಿ ಗೀತಲೇಖನ ಯಜ್ಞವನ್ನು ಮಾಡಬೇಕು. ಯಾಕೆಂದರೆ ಕೋಟಿ ಗೀತಾಲೇಖನ ಯಜ್ಞವನ್ನು ಮೊದಲು ಮಾಡಿದ್ದು ಗಣಪತಿ. ಆದ್ದರಿಂದ ಗಣಪತಿಗೂ ಕೋಟಿ ಗೀತಾಲೇಖನ ಯಜ್ಞಕ್ಕೂ ನಿಖಟವಾದ ಸಂಬಂಧವಿದೆ. ಆದ್ದರಿಂದ ಗಣಪತಿಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಭಗವದ್ಗೀತೆಯನ್ನು ಬರೆಯುವುದುರಿಂದ ಕೃಷ್ಣ ಹಾಗೂ ಗಣಪತಿ ಇಬ್ಬರ ಅನುಗ್ರಹವು ದೊರೆಯುತ್ತದೆ ಎಂದರು
bigtvnews | Hubli Dharwad News | Kannada News | Karnataka News Hubli News | News In Hubli | Local news





