ಹುಬ್ಬಳ್ಳಿ: ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ ಹಾಗೂ ಸೌಹಾರ್ದತೆ ನಿಜಕ್ಕೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಮಾರ್ಗದರ್ಶನವಾಗಿದೆ. ಇಂತಹ ಮಹತ್ವದ ಸಂದೇಶಕ್ಕೆ ಹಳೇ ಹುಬ್ಬಳ್ಳಿಯ ಜನರು ಸಾಕ್ಷಿಯಾಗಿದ್ದಾರೆ.ಹೌದು.. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ನ್ಯೂ ಆನಂದನಗರದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮತ್ತು ಸೌಹಾರ್ದತೆಯ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಯ ಕಾಲಕ್ಕೆ ಹಿಂದೂ ಮುಸ್ಲಿಂ ಜನತೆ ಅನ್ಯೋನ್ಯವಾಗಿ ಸ್ನೇಹ ಬಾಂಧವ್ಯದಿಂದ ಆಚರಿಸುವ ಮೂಲಕ ಕಣ್ಮನ ಸೆಳೆದರು.ಇನ್ನೂ ಇಸ್ಲಾಂ ಧರ್ಮದ ಹಾಗೂ ಹಿಂದೂ ಧರ್ಮದ ಪವಿತ್ರ ಭಾವುಟಗಳನ್ನು ಹಿಡಿದುಕೊಂಡು ಪರಸ್ಪರ ಆತ್ಮೀಯತೆಯಿಂದಲೇ ಆಚರಣೆ ಮಾಡುವ ಮೂಲಕ ಸೌಹಾರ್ದತೆ ಸಾಕ್ಷಿಯಾಗಿದ್ದಾರೆ.
Check Also
ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …
bigtvnews | Hubli Dharwad News | Kannada News | Karnataka News Hubli News | News In Hubli | Local news

