Breaking News

ಪೂಜಾಗಾಂಧಿ ಕಾವೇರಿ ಸಮಸ್ಯೆ ಜೊತೆ ಜೊತೆಗೆ ಮೇಕೆದಾಟು ಯೋಜನೆ ಬಗ್ಗೆನೂ ಪ್ರಸ್ತಾಪ ಮಾಡಿದ್ದರು……

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಬೀದಿಗೆ ಇಳಿದಿವೆ. ಇಂದು (ಸೆಪ್ಟೆಂಬರ್ 29) ಕರ್ನಾಟಕ ಬಂದ್ ಕರೆ ನೀಡಿವೆ. ಈ ಬಂದ್‌ಗೆ ಬಹುತೇಕ ಎಲ್ಲಾ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳು ಬೆಂಬಲವನ್ನು ವ್ಯಕ್ತಪಡಿಸಿವೆ. ಅಂತೆಯೇ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಇಡೀ ಕನ್ನಡ ಚಿತ್ರರಂಗ ಬೆಂಬಲ ವ್ಯಕ್ತಪಡಿಸಿದೆ. ಅಲ್ಲದೆ ಪ್ರತಿಭಟನೆಯಲ್ಲಿ ಭಾಗಿಯಾಗಿದೆ. ಹಿರಿಯ ನಟ ಶ್ರೀನಾಥ್, ಉಮಾಶ್ರೀ, ಲೂಸ್ ಮಾದ ಯೋಗಿ, ಅನಿರುದ್ದ್, ಪೂಜಾ ಗಾಂಧಿ, ಪದ್ಮಾ ವಾಸಂತಿ, ಸುಂದರ್ ರಾಜ್, ರೂಪಿಕಾ, ರವಿ ಚೇತನ್, ಶ್ರೀನಿವಾಸ್ ಮೂರ್ತಿ, ನವೀನ್ ಕೃಷ್ಣ, ಲಹರಿ ವೇಲು, ಧರ್ಮ ಕೀರ್ತಿ ರಾಜ್, ಅನು ಪ್ರಭಾಕರ್, ರಘು ಮುಖರ್ಜಿ, ಚಿಕ್ಕಣ್ಣ, ಗಣೇಶ್ ರಾವ್ ಕೇಸರ್ಕರ್, ಸುಂದರ್ ರಾಜ್, ಅಭಿನಯ, ಪ್ರಮಿಳಾ ಜೋಷಾಯಿ ಸೇರಿದಂತೆ ಹಲವು ಭಾಗವಹಿಸಿದ್ದಾರೆ.

ಈ ವೇಳೆ ಪೂಜಾಗಾಂಧಿ ಕಾವೇರಿ ಸಮಸ್ಯೆ ಜೊತೆ ಜೊತೆಗೆ ಮೇಕೆದಾಟು ಯೋಜನೆ ಬಗ್ಗೆನೂ ಪ್ರಸ್ತಾಪ ಮಾಡಿದ್ದರು. ಪೂಜಾ ಗಾಂಧಿಯ ಮಾತುಗಳು ಎಲ್ಲರ ಗಮನ ಸೆಳೆದಿತ್ತು. ಮತ್ತಷ್ಟು ಸ್ವಚ್ಚವಾಗಿ ಕನ್ನಡದಲ್ಲಿಯೇ ಮಾತಾಡಿದ್ದು ಇನ್ನಷ್ಟು ಹುರುಷು ತಂದಿತ್ತು. ಇದೇ ಸಂದರ್ಭದಲ್ಲಿ ಪರಮೇಶ್ವರ ಭಟ್ಟರ ಕವಿತೆಯನ್ನು ಹೇಳಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕಿವಿ ಮಾತನ್ನು ಹೇಳಿದ್ದಾರೆ. ಅದರ ಝಲಕ್ ಇಲ್ಲಿದೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *