Breaking News

ತರಗತಿ ಬಿಟ್ಟು ಹೋರಾಟಕ್ಕೆ ನಿಂತ ವಿದ್ಯಾರ್ಥಿಗಳು

ಹುಬ್ಬಳ್ಳಿ:ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿಯ ವಿದ್ಯಾನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಎದುರು ಸಮಾವೇಶಗೊಂಡು ಕಾರ್ಯಕರ್ತರು ಬೇಕೆ ಬೇಕು ನ್ಯಾಯ ಬೇಕು, ಅನುದಾನ ಬಿಡುಗಡೆ ಮಾಡದ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳಾ ಕಾಲೇಜಿನಲ್ಲಿರುವ ಸಮಸ್ಯೆ ಪರಿಹರಿಸಬೇಕು. ಯಾವುದೇ ಜನಪ್ರತಿನಿಧಿಗಳು ವಿದ್ಯಾರ್ಥಿಗಳ ನೋವನ್ನು ಆಲಿಸಲು ಸಿದ್ಧರಿಲ್ಲ. ಕಾಲೇಜು ಕಟ್ಟಡ ಬೀಳುವ ಸ್ಥಿತಿಯಲ್ಲಿದೆ. ಪ್ರಾಚಾರ್ಯರು ಸಮಸ್ಯೆ ಇಲ್ಲ ಎಂದು ಹೇಳುತ್ತಿದ್ದಾರೆ. ಪ್ರಾಧ್ಯಾಪಕರು ಸರಿಯಾಗಿ ಸಮಯಕ್ಕೆ ಬರಲ್ಲ. ಸರ್ಕಾರಿ ಕಾಲೇಜು ಅಂದರೆ ಅವರಿಗೆ ಕಾಳಜಿ ಇಲ್ಲ. ಡೋರ್ ಸರಿ ಇಲ್ಲ, ಸ್ವಚ್ಛತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಂಜಿನಿಯರಿಂಗ್, ಎಂಬಿಎ ಮಾಡುವುದು ವಿದ್ಯಾರ್ಥಿಗಳ ಕನಸಾಗಿದೆ. ದೊಡ್ಡ ಕಾಲೇಜು ಸರ್ಕಾರಿ ಸೀಟು ಕೊಡುತ್ತಿಲ್ಲ. ಖಾಸಗಿ ಮಾಡಿ ಹಣ ತಿನ್ನುತ್ತಿದ್ದಾರೆ. ಖಾಸಗಿ ಕಾಲೇಜು ದುಡ್ಡಿಗೆ ಮಾರಿಕೊಳ್ಳುತ್ತಿದ್ದಾರೆ. ಲ್ಯಾಬ್ ಗಳು ಸರಿ ಇಲ್ಲ. ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಕ್ರೋಶ ವ್ಯಕ್ತಪಡಿಸಿದರು.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *