ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಇತ್ತೀಚಿನ ವರ್ಷಗಳಲ್ಲಿ ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಿದೆ. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ನಗರದ ಜನರ ಮೊದಲ ಬೇಡಿಕೆಯೇ ಟ್ರಾಫಿಕ್ ನಿಯಂತ್ರಿಸಿ ಎಂದಾಗಿರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಎರಡು ವಿನೂತನ ಕ್ರಮಕ್ಕೆ ಮುಂದಾಗಿದೆ.
ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಮತ್ತೆ ಮತ್ತೆ ಸಂಕಷ್ಟಗಳನ್ನು ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಸಮಸ್ಯೆಯನ್ನು ನಿಭಾಯಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೀಗ ಟ್ರಾಫಿಕ್ ಜಾಮ್ ನಿವಾರಿಸಲು ನಗರದಲ್ಲಿ ಶಾಲಾ ಸಮಯದಲ್ಲಿ ಬದಲಾವಣೆ ಮಾಡಲು ಚಿಂತನೆ ನಡೆಸಿದೆ. ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ರಾಜ್ಯದ ಸಾರಿಗೆ ಇಲಾಖೆಯು ನಗರದ ಕೆಲವು ರಸ್ತೆಗಳಲ್ಲಿ ದಟ್ಟಣೆ ತೆರಿಗೆಯನ್ನು ವಿಧಿಸಲು ಯೋಜಿಸುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





