ಬೆಂಗಳೂರು: ಕನ್ನಡ ಕಿರುತೆರೆಯ ಬೃಹತ್ ರಿಯಾಲಿಟಿ ಶೋ ಎಂಬ ಖ್ಯಾತಿಯ ಬಿಗ್ಬಾಸ್ ಕನ್ನಡದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಾಣಿಸಿಕೊಂಡಿದ್ದು,ಈ ಕುರಿತು ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ವಿಧಾನಸಭೆ ಸ್ಪೀಕರ್ಗೆ ಯು ಟಿ ಖಾದರ್ ಅವರಿಗೆ ದೂರು ನೀಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕರಾಗಿರುವ ಪ್ರದೀಪ್ ಈಶ್ವರ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಯು ಟಿ ಖಾದರ್ ದೂರು ನೀಡುವ ಮೂಲಕ ಸೇವಾ ಸಂಸ್ಥೆಯು ಆಗ್ರಹಿಸಿದೆ.
ಇನ್ನು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಗೆ ಹೋಗಿರುವುದನ್ನ ಪ್ರಶ್ನಿಸಿ ವಿಧಾನಸಭೆ ಸ್ವೀಕರ್ ಯು ಟಿ ಖಾದರ್ ಅವರಿಗೆ ದೂರು ಸಲ್ಲಿಸಿದ್ದಾರೆ. ರಾಜ್ಯ ಸರಕಾರದಿಂದ ಸಂಬಳ ಪಡೆಯುತ್ತಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರಾದ ಪ್ರದೀಪ್ ಈಶ್ವರ್ ಅವರು ಜವಾಬ್ದಾರಿಯುತ ಪ್ರಜೆಯಾಗಿದ್ದಾರೆ.
ತಮ್ಮ ಕ್ಷೇತ್ರದ ಜನರಿಗೆ ಏನಾದರೂ ಸಮಸ್ಯೆಯಾದಗ ಸ್ಪಂದಿಸುವುದು ಇವರ ಕರ್ತವ್ಯ. ಆದರೆ, ಈ ಜವಾಬ್ದಾರಿ ಮರೆತು ಇವರು ಬಿಗ್ಬಾಸ್ ಮನರಂಜನೆ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ಇಂತಹ ತಪ್ಪು ಮಾಡಿರುವ ಇವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ದೂರು ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





