ಗದಗ: ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ ರಾಜ್ಯ ಹೆದ್ದಾರಿ ಬಂದ ಮಾಡಿ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಹೆದ್ದಾರಿ ಬಂದ್ ಮಾಡಿದ ರೈತರು, ಬೇಕೆ ಬೇಕು ಕರೆಂಟ್ ಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏಕಾಏಕಿ ರಾಜ್ಯ ಹೆದ್ದಾರಿ ಬಂದ್ ಮಾಡಿದ್ದರಿಂದ ಕಿಲೋಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತ ವಾಹನಗಳು ಇದ್ದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಪರದಾಡಿದ್ದಾರೆ. ಪೊಲೀಸರ ಮನವೊಲಿಕೆಗೂ ಬಗ್ಗದ ರೈತರು, ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಬಂದು ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ ರೈತರ ಪಟ್ಟು ಹಿಡಿದಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





