ಇಡೀ ದೇಶವೇ ತಿರುಗಿ ನೋಡುವಷ್ಟರ ಮಟ್ಟಿಗೆ ಗಲಭೆ, ಘರ್ಷಣೆಗಳು ನಡೆದು ಉದ್ವಿಗ್ನ ಪರಿಸ್ಥಿತಿ ಮಣಿಪುರದಲ್ಲಿ ನಿರ್ಮಾಣವಾಗಿತ್ತು. ಇಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೋ ಮತ್ತು ಛಾಯಾಚಿತ್ರಗಳು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿವೆ. ಇದರಿಂದ ಉದ್ವಿಗ್ನ ಸ್ಥಿತಿ ಎದುರಿಸುತ್ತಿರುವ ಆ ರಾಜ್ಯದ ಬಿಜೆಪಿ ಸರ್ಕಾರ ಕೆಲವು ನಿರ್ಬಂಧಗಳನ್ನು ವಿಧಿಸಿದೆ.
ಮಣಿಪುರ ಹಿಂಸಾಚಾರ ಕುರಿತಂತೆ ಯಾವುದೇ ವಿಡಿಯೋ ಆಗಲಿ, ಫೋಟೊಗಳನ್ನಾಗಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ ಎಂದು ಇಲ್ಲಿನ ಬಿಜೆಪಿ ಸರ್ಕಾರ ನಿಷೇಧ ಹೇರಿದೆ. ಈ ಮೂಲಕ ಸಂಘರ್ಷ ಪೀಡಿತ ರಾಜ್ಯಕ್ಕೆ ಸಹಜ ಸ್ಥಿತಿ ತರುವತ್ತ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





