Breaking News

ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಕಿಡಿಕಾರಿದ್ದಾರೆ…..

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಗೆ ಗುತ್ತಿಗೆದಾರರ ಮೂಲಕ ಹಣ ಸಂಗ್ರಹ ಎಂದು ಮುನಿರತ್ನ ಆರೋಪಕ್ಕೆ ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಕಿಡಿಕಾರಿದ್ದಾರೆ.

ಮುನಿರತ್ನ ಅವರು ಆರೋಪ ಮಾಡಿದ್ರೆ ಮಾಡಬಹುದು. ಐಟಿ ರೇಡ್ ಗೂ, ಸರ್ಕಾರಕ್ಕೂ ಏನು ಸಂಬಂಧ ಬಿಜೆಪಿ ಸರ್ಕಾರ ಬಂದ ಮೇಲೆ 500 ರೈಡ್ ಆಗಿದೆ, ಅದಕ್ಕೂ ಕಾಂಗ್ರೆಸ್ ಸಂಬಂಧ ಇಲ್ಲ. ಐಟಿ ಡಿಪಾರ್ಟ್ಮೆಂಟ್ ಇದೆ, ರೈಡ್ ಆದವರು ಇದಾರೆ. ಅವರವರ ಮಧ್ಯೆವಿರುವ ವ್ಯವಸ್ಥೆ ಅದು, ಅದನ್ನ ನಮಗೆ ಕನೆಕ್ಟ್ ಮಾಡೋಕೆ ಆಗುತ್ತಾ? ಎಂದು ಪ್ರಶ್ನಿಸಿದರು.

ಯಾರ ಮನೆ ಮೇಲೆ ರೈಡ್ ಆಗಿದೆ ಎಂದು ಪ್ರಶ್ನೆ. ಗುತ್ತಿಗರದಾರರಾ ಅವರು? ಗುತ್ತಿಗೆದಾರರ ಮೇಲೆ ಆಗಿರಬಹುದು, ಸಾಕಷ್ಟು ಜನ ಗುತ್ತಿಗೆದಾರರು ಎಕೋ ಫ್ರೆಂಡ್ಲಿ ಇರ್ತಾರೆ. ಎಲ್ಲಾ ಪಕ್ಷಗಳ ಜೊತೆ ಗುತ್ತಿಗೆದಾರರು ಚೆನ್ನಾಗಿ ಇರ್ತಾರೆ, ಅದಕ್ಕೂ ನಮಗೂ ಸಂಬಂಧ ಇಲ್ಲ. ಡಿಪಾರ್ಟ್ಮೆಂಟ್ ಹಾಗೂ ಅವರ ಮಧ್ಯೆ ಇರುವ ವಿಚಾರ. ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಹೇಳಿದರು.

Share News

About BigTv News

Check Also

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್, ಫೋಟೋಶೂಟ್ ಪೋಸ್ಟ್‌ಗೆ ಬ್ರೇಕ್..? ಡಿಜಿಪಿಗೆ ಶಿಫಾರಸು ಪತ್ರ..

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್ ಬೇಡ..! ಖಾಕಿಯ ಘನತೆ ಉಳಿಸಲು ಕಠಿಣ ನಿಯಮಕ್ಕೆ ಶಿಫಾರಸು… ಬೆಂಗಳೂರು: ಪೊಲೀಸ್ ಸಮವಸ್ತ್ರ ಧರಿಸಿ ರೀಲ್ಸ್, …

Leave a Reply

Your email address will not be published. Required fields are marked *