ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಹಳಷ್ಟು ಪ್ರವಾಸಿತಾಣಗಳಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ಜೀಪ್ಗಳ ಸ್ಥಿತಿಯನ್ನು ತಿಳಿಯುವ ಉದ್ದೇಶದಿಂದ ತಂಡಗಳನ್ನು ರಚನೆ ಮಾಡಿ ಪರಿಶೀಲನೆ ಮಾಡಲಾಗುವುದು ಎಂದು ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಾದೇಶಿಕ ಸಾರಿಗೆ (RTO) ಅಧಿಕಾರಿ ಆರ್.ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತಾನಾಡಿದ ಅವರು, ಪ್ರಾದೇಶಿಕ ಸಾರಿಗೆ ಕಚೇರಿಗೆ ಸಂಬಂಧಿಸಿದಂತೆ ಏನೇ ಸಮಸ್ಯೆಗಳಿದ್ದರೂ ಮುಕ್ತವಾಗಿ ನನ್ನನ್ನು ಕಾಣಬಹುದು. ಹಿಂದೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಇದ್ದಂತಹ ಸಮಸ್ಯೆಗಳು ಮುಂದೆ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ. ಸಾರ್ವಜನಿಕರು ಏನೇ ಸಮಸ್ಯೆ ಇದ್ದರೂ ನೇರವಾಗಿ ಸಂಪರ್ಕಿಸಿ ಬಗೆಹರಿಸಿಕೊಳ್ಳಬೇಕು. ಸಾರ್ವಜನಿಕರ ಸಮಸ್ಯೆಯನ್ನು ಕೇಳಲೆಂದೇ ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ಕೂಡ ಇದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





