Breaking News

ಜರ್ಮನಿ ಕಂಪನಿಗಳು ರಾಜ್ಯದ ಕೈಗಾರಿಕಾ ಸಾಮರ್ಥ್ಯ ಹೆಚ್ಚಿಸಲು ತಮ್ಮದೇ ಕಾಣಿಕೆ ನೀಡುತ್ತಿವೆ….

ಬೆಂಗಳೂರು: ತಯಾರಿಕಾ ವಲಯವಾಗಿ ಬೆಳೆಯುವ ಗುರಿ ಹೊಂದಿರುವ ಕರ್ನಾಟಕ ಸರ್ಕಾರವು ಜರ್ಮನಿ ಕಂಪನಿಗಳಿಗೆ ಹೆಚ್ಚಿನ ಬೆಂಬಲ ನೀಡಲು ಇತ್ತೀಚೆಗೆ ಹಲವು ಉಪಕ್ರಮಗಳನ್ನು ಜಾರಿಗೊಳಿಸಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಶುಕ್ರವಾರ ಹೇಳಿದರು.

ಬೆಂಗಳೂರಿನಲ್ಲಿ ಶುಕ್ರವಾರ VDMA ಮೆಕ್ಯಾನಿಕಲ್ ಎಂಜಿನಿಯರಿಂಗ್ ಸಮಾವೇಶ-2023ರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಸಚಿವರು, ಅವರು ಕರ್ನಾಟಕ ಮತ್ತು ಜರ್ಮನಿ ಮುಂಚಿನಿಂದಲೂ ಸದೃಢ ಕೈಗಾರಿಕಾ ಸಹಭಾಗಿತ್ವ ಹೊಂದಿವೆ. ಇದರಿಂದ ರಾಜ್ಯದಲ್ಲಿ ತಲೆಎತ್ತಲಿರುವ ಯೋಜನೆಗಳ ಕುರಿತು ವಿವರಿಸಿದರು.

ತಯಾರಿಕೆ ಮತ್ತು ತಾಂತ್ರಿಕತೆ ಕ್ಷೇತ್ರಗಳಲ್ಲಿ ಕರ್ನಾಟಕ ಹಾಗೂ ಜರ್ಮನಿ ಸಹಭಾಗಿತ್ವ ಪರಸ್ಪರ ಬೆಳವಣಿಗೆಗೆ ಹೆಚ್ಚಿನ ಕೊಡುಗೆ ನೀಡಿದೆ. ಜರ್ಮನಿ ಕಂಪನಿಗಳು ರಾಜ್ಯದ ಕೈಗಾರಿಕಾ ಸಾಮರ್ಥ್ಯ ಹೆಚ್ಚಿಸಲು ತಮ್ಮದೇ ಕಾಣಿಕೆ ನೀಡುತ್ತಿವೆ. ವಾಹನೋದ್ಯಮ, ಮೂಲಸೌಕರ್ಯ, ಸ್ಮಾರ್ಟ್ ಸಿಟಿ, ಡಿಜಿಟಲ್ ಪರಿಹಾರಗಳಿಗೆ ಸಂಬಂಧಿಸಿದಂತೆ ಗಮನ ಸೆಳೆಯುವಂತಹ ಕೆಲಸ ಮಾಡುತ್ತಿವೆ ಎಂದು ಅವರು ಮಾಹಿತಿ ನೀಡಿದರು

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *