Breaking News

ಲಿಂಗಾಯತ ಸಮಾಜದ ಅನ್ಯಾಯ ಸರಿಪಡಿಸಬೇಕು….

ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು.ಲಿಂಗಾಯತ ಅನ್ಯಾಯದ ಬಗ್ಗೆ ಶಾಮನೂರು ಅವರು ಮಾತನಾಡಿದ್ದು ಸತ್ಯಕ್ಕೆ ಹತ್ತಿರವಾಗಿದೆ.ಶಾಮನೂರು ಅವರು ನಮ್ಮೆಲ್ಲರ ಧ್ವನಿಯಾಗಿ ಮಾತನಾಡಿದ್ದಾರೆ.ನಾನು ನಮ್ಮ ಸಮಾಜಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನಿಸಿದ್ದೆನೇ,ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಅಂತ ಸುಮ್ಮನಿದ್ದೆ.ಕೇವಲ ಲಿಂಗಾಯತ ಸಮುದಾಯ ಮಾತ್ರವಲ್ಲ ಯಾವುದೇ ಸಮಾಜಕ್ಕೆ ಅನ್ಯಾಯವಾಗ ಬಾರದರು ಇದನ್ನು ಸಿಎಂ ಸರಿಪಡಿಸಬೇಕು ಎಂದು ಹೇಳಿದರು.

ಪಂಚಮಸಾಲಿ ಸಮಾಜಕ್ಕೆ ಆದಷ್ಟು ಬೇಗ 2A ಮೀಸಲಾತಿ ಕೊಡಬೇಕು,ರಾಜ್ಯ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ, ಕಣ್ಣು ತೆರೆದಿಲ್ಲ,ಸೌಜನ್ಯಾಕ್ಕದರೂ ನಮ್ಮನ್ನು ಕರೆದು ಮಾತಾಡಿಲ್ಲ,ಪಂಚಮಸಾಲಿ ಸಮಾಜ ಈ ಬಾರಿ ಕಾಂಗ್ರೆಸ್ ಬೆನ್ನಿಗೆ ನಿಂತಿದೆ ಅನ್ನೋದನ್ನು ತಿಳ್ಕೋಬೇಕು,ಲಿಂಗಾಯತ ಪಂಚಮಸಾಲಿ ವಿಚಾರದಲ್ಲಿ ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದರು.
ದುಷ್ಟ ಮನಸ್ಸುಗಳು ನಮಗೆ ಮೀಸಲಾತಿ ಸಿಗದಂತೆ ತಡೆ ಹಿಡಿದಿವೆ.ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಅವರ ಮೇಲೆ ವಿಶ್ವಾಸವಿದೆ.ಲೋಕಸಭಾ ಚುನಾವಣೆಯೊಳಗೆ ಮೀಸಲಾತಿ ಕೊಟ್ಟು ಸಮಾಜದ ಋಣ ತೀರಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.
ಸಮಾಜಕ್ಕೆ ಯಾರು ಕೊಡುತ್ತಾರೆ ಅವರನ್ನು ಗೆಲ್ಲಿಸುತ್ತೇವೆ. ಕೊಡದೆ ಇರುವವರ ವಿರುದ್ಧ ಅಸಮಾಧಾನ ಗೊಳ್ಳುವುದು ನಮ್ಮ ಸಮಾಜಕ್ಕೆ ಗೊತ್ತು ಎಂದು ಹುಬ್ಬಳ್ಳಿಯಲ್ಲಿ ಮಾತನಾಡಿದರು.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *