ಮಂಡ್ಯ: 2024 ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದೆ. ಇತ್ತ ಬಿಜೆಪಿಗೆ 24 ಹಾಗೂ ಜೆಡಿಎಸ್ ಗೆ 4 ಕ್ಷೇತ್ರಗಳ ಕುರಿತು ಚರ್ಚೆಯಾಗಿದ್ದು, ದಸರಾ ಹಬ್ಬದ ಬಳಿಕ ಇನ್ನೊಂದು ಸುತ್ತಿನ ಮಾತುಕತೆ ನಂತರ ಕ್ಷೇತ್ರ ಹಂಚಿಕೆ ಅಂತಿಮವಾಗಲಿದೆ.
ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಪ್ಲಾನ್ ನಡೆಸಿದ್ದು, ಇತ್ತ 28 ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಮೈತ್ರಿ ಮಾತುಕತೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನ ಈ ಹಿಂದೆ ಭೇಟಿ ಮಾಡಿದ್ರು. ಆದರೆ, ಈ ಭೇಟಿಯ ವೇಳೆ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನ ಕರೆದುಕೊಂಡು ಹೋಗಿದ್ದು, ಸಾಕಷ್ಟು ಪ್ರಶ್ನಗೆಗಳನ್ನ ಹುಟ್ಟುಹಾಕುವಂತೆ ಮಾಡಿದೆ.