Breaking News

ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಬಾಲಕ ಸಾವು…

ಧಾರವಾಡ: ರಸ್ತೆ ಬದಿ ನಿಂತಿದ್ದ ಬಾಲಕನಿಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಮೃತಪಟ್ಟ ಘಟನೆ ಇಂದು ಮುಂಜಾನೆ ಧಾರವಾಡ-ಹಳಿಯಾಳ ರಸ್ತೆಯಲ್ಲಿನ ತಾಲೂಕಿನ ಸಲಕಿನಕೊಪ್ಪದ ಬಳಿ ಸಂಭವಿಸಿದೆ. ಮುಧೋಳ ಮೂಲದ ಅರ್ಷದ ಅಹ್ಮದ ಸಲೀಂ ಚೌಧರಿ (8) ಮೃತಪಟ್ಟಿದ್ದು, ದಾಂಡೇಲಿಗೆ ತೆರಳುತ್ತಿದ್ದ ಸಮಯದಲ್ಲಿ ಧಾರವಾಡ ತಾಲೂಕಿನ ಸಲಕಿನಕೊಪ್ಪದ ಬಳಿ ಉಪಹಾರಕ್ಕಾಗಿ ಹೊಟೇಲ್ ಬಳಿ ಕಾರು ನಿಲ್ಲಿಸಿದ್ದರು.

ಉಪಹಾರ ಮುಗಿಸಿ ಬಾಲಕ ಕಾರು ಬಳಿ ನಿಂತ ಸಮಯದಲ್ಲಿ, ದಾಂಡೇಲಿಯಿಂದ ಸೊಲ್ಲಾಪುರಕ್ಕೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ಪಿಎಸ್‌ಐ ಬಸನಗೌಡ ಮೆಳೆಪ್ಪನವರ ಭೇಟಿ ನೀಡಿ, ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಕಲೆ ಹಾಕಿದರು. ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪಿಎಸ್‌ಐ-ಪಿಸಿ ಮೇಲೆ ಲೋಕಾಯುಕ್ತ ದಾಳಿ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ!

ಭ್ರಷ್ಟಾಚಾರಕ್ಕೆ ಬಿಗಿ ಹೊಡೆತ: ಪಿಎಸ್‌ಐ, ಪಿಸಿ ಬಂಧನಕ್ಕೆ ಠಾಣೆ ಮುಂದೆ ಪಟಾಕಿ ಹಬ್ಬ! ಲೋಕಾಯುಕ್ತ ದಾಳಿ ನಂತರ ಜನರ ಸಂಭ್ರಮ: …

Leave a Reply

Your email address will not be published. Required fields are marked *