ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಟಿಟಿ ವಾಹನ ರಸ್ತೆ ಮಧ್ಯೆ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಬಳಿ ನಡೆದಿದೆ.
ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನದ ಬಳಿಕ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆಂದು ಬರುವಾಗ ಈ ದುರ್ಘಟನೆ ಸಂಭವಿಸಿದೆ. ಟಿಟಿ ವಾಹನದಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದು ಕೆಲವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿ ವಾಹನ ಮೂಲತಃ ಕಾರವಾರ ಜಿಲ್ಲೆಯ ಶಿರಸಿ ಮೂಲದ್ದಾಗಿದೆ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





