ಮೈಸೂರು: ಒಕ್ಕಲಿಗರ ವಿರುದ್ಧ ಪ್ರೊ.ಭಗವಾನ್ ನೀಡಿದ್ದ ಹೇಳಿಕೆ ದಿನಕ್ಕೊಂದು ವಿವಾದ ಪಡೆದುಕೊಳ್ಳುತ್ತಿದ್ದು, ಇದೀಗ ಖಾಸಗಿಯಾಗಿ ಮೈಸೂರಿನಲ್ಲಿ ಆಯೋಜನೆಗೊಂಡಿದ್ದ ದಸರಾ ಯುವ ಕವಿಗೋಷ್ಠಿಯಿಂದ ಭಗವಾನ್ಗೆ ಕೊಕ್ ನೀಡಲಾಗಿದೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ಪಂದನ ಸಾಂಸ್ಕೃತಿಕ ಪರಿಷತ್ ವತಿಯಿಂದ ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಇಂದು (ಅಕ್ಟೋಬರ್ 16ರಂದು) ‘ದಸರಾ ಯುವ ಕವಿಗೋಷ್ಠಿ’ಯ ಉದ್ಘಾಟನೆಯನ್ನು ವಿಚಾರವಾದಿ ಕೆ.ಎಸ್.ಭಗವಾನ್ ಅವರ ಬದಲಿಗೆ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಹಾಗೂ ಸಾಹಿತಿ ಡಾ. ಡಿ.ಕೆ.ರಾಜೇಂದ್ರ ಉದ್ಘಾಟಿಸಿದ್ದಾರೆ.
ಪ್ರೊ.ಕೆ.ಎಸ್.ಭಗವಾನ್ ಅವರು ಇತ್ತೀಚಿಗೆ ನಡೆದ ಮಹಿಷ ದಸರಾ ಸಮಾರಂಭದಲ್ಲಿ ಒಕ್ಕಲಿಗ ಸಮುದಾಯದ ಕುರಿತು ಅವಹೇಳನ ಮಾಡಿದ ಕಾರಣ ಅವರ ವಿರುದ್ಧ ಒಕ್ಕಲಿಗ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಜೊತೆಗೆ ಅಕ್ಟೋಬರ್ 16ರಂದು ನಡೆಯಲಿರುವ ದಸರಾ ಯುವ ಕವಿಗೋಷ್ಠಿಯ ಉದ್ಘಾಟನೆಗೆ ಆಗಮಿಸಲಿದ್ದ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸುವ ನಿರ್ಧಾರ ಕೈಗೊಂಡಿದ್ದರು
bigtvnews | Hubli Dharwad News | Kannada News | Karnataka News Hubli News | News In Hubli | Local news





