ಕಸ್ತೂರಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪಂಜರದ ಗಿಳಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಬಣ್ಣದ ಲೋಕದ ನಂಟು ಬೆಳೆಸಿಕೊಂಡಿರುವ ಸಂಗೀತಾ ಭಟ್ ಸದ್ಯ ಹಿರಿತೆರೆಯಲ್ಲಿ ಬ್ಯುಸಿ. ಅದ್ಭುತ ನಟನೆಯ ಮೂಲಕ ಕಿರುತೆರೆಯ ಜೊತೆಗೆ ಹಿರಿತೆರೆಯಲ್ಲಿಯೂ ನಟನಾ ಕಂಪನ್ನು ಪಸರಿಸುತ್ತಿರುವ ಸಂಗೀತಾ ಭಟ್ ಇತ್ತೀಚೆಗಷ್ಟೇ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಯಡಿಯೂರು ಶ್ರೀ ಸಿದ್ಧಲಿಂಗೇಶ್ವರ’ ಧಾರಾವಾಹಿಯಲ್ಲಿ ನಾಗಿಣಿಯಾಗಿ ಕಾಣಿಸಿಕೊಂಡಿದ್ದರು. ಅಂದ ಹಾಗೇ ಸಂಗೀತಾ ಭಟ್ ಅವರಿಗೂ ಸ್ಟಾರ್ ಸುವರ್ಣಗೂ ಇದು ಹೊಸ ಭಾಂದವ್ಯವೇನಲ್ಲ.. ಬದಲಿಗೆ ತುಂಬಾ ಹಳೆಯ ನಂಟು ಇದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಭಾಗ್ಯವಂತರು’ ಧಾರಾವಾಹಿಯಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು ಸಂಗೀತಾ ಭಟ್. ತದ ನಂತರ ಹಿಂತಿರುಗಿ ನೋಡದ ಈಕೆ ಮುಂದೆ ಉದಯ ಟಿವಿಯ ‘ಚಂದ್ರಚಕೋರಿ’, ಸುವರ್ಣ ವಾಹಿನಿಯ ‘ನೀಲಿ’, ಕಸ್ತೂರಿ ವಾಹಿನಿಯ ‘ಚಂದ್ರಮುಖಿ’ ಧಾರಾವಾಹಿಗಳಲ್ಲಿ ಅಭಿನಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





