Breaking News

ಬಹಳ ವಿಶೇಷ ಮತ್ತು ಸ್ಮರಣೀಯ ದಿನ: ಸಿದ್ದರಾಮಯ್ಯ

ಬೆಂಗಳೂರು: ಕೆ ಆರ್ ಪುರದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟದವರೆಗೆ ಮೆಟ್ರೋ ರೈಲು ವಿಸ್ತ್ರತ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುಯಲ್ ಮೂಲಕ ಶುಕ್ರವಾರ ಉದ್ಘಾಟನೆ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ವರ್ಚುಯಲ್ ಸಭೆ ಮೂಲಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾದರು. ರಾಜ್ಯ ಯೋಜನೆ ಆಯೋಗದ ಉಪಾಧ್ಯಕ್ಷ ಪ್ರೊ ರಾಜೀವ್ ಗೌಡ, ಮಾಜಿ ಸಚಿವ, ಶಾಸಕ ಎಸ್ ಟಿ ಸೋಮಶೇಖರ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.

ಇನ್ನೂ ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ,ಇಂದು ನಿಮ್ಮೆಲ್ಲರೊಂದಿಗಿರುವುದು ಬಹಳ ವಿಶೇಷ ಮತ್ತು ಸ್ಮರಣೀಯ ದಿನ. ಬೆಂಗಳೂರು ನಗರವು ಆಹ್ಲಾದಕರ ಹವಾಮಾನ, ಹಸಿರು ಉದ್ಯಾನವನಗಳು ಮತ್ತು ದೇಶದ ಐಟಿ ರಾಜಧಾನಿ ಎಂದು ಹೆಸರುವಾಸಿಯಾಗಿದೆ. ವಿಶ್ವದರ್ಜೆಯ ಮೆಟ್ರೋ ರೈಲು ವ್ಯವಸ್ಥೆಯನ್ನು ಸೇರಿಸುವುದರೊಂದಿಗೆ, ಕರ್ನಾಟಕದ ಜನತೆಗೆ ಹೆಮ್ಮೆಯ ವಿಷಯವಾಗಿದೆ.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *