ತುಮಕೂರ: ಮಳೆಯಿಲ್ಲದೇ ಕಂಗಲಾಗಿರುವ ರೈತರು, ಮಧುಗಿರಿ ಭಾಗದಲ್ಲಿ ಬೆಳೆಗಳನ್ನು ನಾಶಪಡಿಸುತ್ತಿರುವ ಘಟನೆ ಜರುಗಿದೆ. ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಶೇಂಗಾವನ್ನ ಟ್ರಾಕ್ಟರ್ ನಲ್ಲಿ ರೈತ ನಾಗರಾಜಪ್ಪ ನಾಶಪಡಿಸಿದ್ದಾನೆ. ಮಳೆಯಿಲ್ಲದೇ ಫಸಲು ಸಮರ್ಪಕವಾಗಿ ಬಾರದ ಹಿನ್ನೆಲೆಯಲ್ಲಿ ಬೆಳೆ ನಾಶ ಮಾಡಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿಯಲ್ಲಿ ರೈತರು ಇದ್ದು, ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಲಕ್ಲಿಹಟ್ಟಿ ಗ್ರಾಮದಲ್ಲಿ ಘಟನೆ ಜರುಗಿದೆ. ಸುಮಾರು ನಾಲ್ಕು ಎಕರೆಯಲ್ಲಿ ಶೇಂಗಾ ಬೆಳೆ ಬೆಳೆಯಲಾಗಿತ್ತು. ಲಕ್ಷಾಂತರ ರೂ ಖರ್ಚು ಮಾಡಿ ಶೇಂಗಾ ಬೆಳೆದಿದ್ದ ರೈತ ನಾಗರಾಜಪ್ಪ, ಟ್ರಾಕ್ಟರ್ ನಲ್ಲಿ ಉಳುಮೆ ಮಾಡಿ ಬೆಳೆ ನಾಶಪಡಿಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





