ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಜನತಾ ಪಕ್ಷದ ನಾಗೇಶ್ ಎಂಬುವರು ದೂರು ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿ ವನ್ಯ ಜೀವಿ ಸಂರಕ್ಷಣಾ ಅಧಿಕಾರಿಗಳಿಗೆ ನಾಗೇಶ್ ಫೋಟೋ ದಾಖಲೆ ಸಮೇತ ದೂರು ಕೊಟ್ಟಿದ್ದು, ನಟ ದರ್ಶನ್ ಕೊರಳಿನಲ್ಲಿ ಹುಲಿ ಉಗುರು ಧರಿಸಿದ್ದಾರೆ ಎಂದು ಫೋಟೋ ಸಮೇತ ದಾಖಲೆಗಳನ್ನೂ ನೀಡಿದ್ದಾರೆ. ಈಗಾಲಾದ್ರೂ ನಟ ದರ್ಶನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಟ ದರ್ಶನ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಗೇಶ್ ಅವರು ಬೆಂಗಳೂರಿನ ಅರಣ್ಯ ಭವನದಲ್ಲಿ ಪ್ರತಿಭಟನೆಯನ್ನೂ ಸಹ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





