ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ತಣ್ಣಗಾಗುವ ಲಕ್ಷಣಗಳಿಲ್ಲ. ಬಿಗ್ ಬಾಸ್ ಕನ್ನಡ ಸೀಸನ್ ಹತ್ತರ ಸ್ಪರ್ಧಿ ವರ್ತೂರು ಸಂತೋಷ್ ಬಂಧನದಿಂದ ಆರಂಭವಾದ ಪ್ರಕರಣ ಈಗ ಸ್ಯಾಂಡಲ್ವುಡ್ನಲ್ಲಿ ಬಿರುಗಾಳಿ ಎಬ್ಬಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನಟ, ರಾಜ್ಯ ಸಭಾ ಸದಸ್ಯ ಜಗ್ಗೇಶ್ ಮನೆಯಲ್ಲಿ ಶೋಧ ನಡೆಸಿದ್ದರು.
ಹುಲು ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೆ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ನಟನ ಮನೆ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದರು. ಅವರಿಗೆ ಬೇಕಾದ ಲಾಕೆಟ್ ನೀಡಿದ್ದೇನೆ ಎಂದು ಮಾಹಿತಿ ಹಂಚಿಕೊಂಡಿದ್ದ ಅವರು, ಈಗ ಪ್ರಕರಣದಲ್ಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





