ಆಪರೇಷನ್ ಕಮಲವನ್ನು ಅಸ್ತ್ರವನ್ನಾಗಿಸಿಕೊಂಡು ಏಳೆಂಟು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ, ಆದರೆ, ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು ಬೆಳಗಾವಿ: ಆಪರೇಷನ್ ಕಮಲವನ್ನು ಅಸ್ತ್ರವನ್ನಾಗಿಸಿಕೊಂಡು ಏಳೆಂಟು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ, ಆದರೆ, ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕರ್ನಾಟಕ ಘಟಕದಲ್ಲಿ ನಾಯಕತ್ವದ ರೇಸ್ ಇಲ್ಲ, ಬಿಜೆಪಿಯವರಿಗೆ ಬೇರೆಯವರ ಕೆರೆಯಲ್ಲಿ ಮೀನು ಹಿಡಿಯುವುದೇ ಕೆಲಸ. ಅವರಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗದಿರುವುದು ವಿಪರ್ಯಾಸ’ ಎಂದರು. ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ, ಸರಕಾರ ಗಟ್ಟಿಯಾಗಿ ನಿಂತಿದೆ, ಚುನಾವಣೆ ವೇಳೆ ಘೋಷಿಸಿದ್ದ ಖಾತ್ರಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ, ಎರಡೂವರೆ ವರ್ಷದ ಬಳಿಕ ಸಿ.ಎಂ ಬದಲಾಗುತ್ತಾರಾ’ ಎಂಬ ಪ್ರಶ್ನೆಗೆ, ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ. ಈಗ ಸರ್ಕಾರ ಸುಭದ್ರವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





