Breaking News

ಹುಬ್ಬಳ್ಳಿಯಲ್ಲಿ ಉದ್ಯಮಿಗಳಿಬ್ಬರ ಮನೆಗೆ ದಿಢೀರ್‌ ಭೇಟಿ….

ಹುಬ್ಬಳ್ಳಿ: ಹುಲಿ ಉಗುರಿನ ಪೆಂಡೆಂಟ್‌ ಧರಿಸಿದ್ದಕ್ಕೆ ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್‌ ಅವರನ್ನು ಬಂಧಿಸಿದ್ದರು. ಆಗಿನಿಂದ ಈ ಸಂಬಂಧ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಹಾಗೆಯೇ ಹುಬ್ಬಳ್ಳಿಯಲ್ಲಿ ಉದ್ಯಮಿಗಳಿಬ್ಬರು ಹುಲಿ ಉಗುರು ಪೆಂಡೆಂಟ್‌ ಧರಿಸಿರುರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಇಂದು ಈ ಇಬ್ಬರು ಉದ್ಯಮಿಗಳ ಮನೆಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಲಯ ಅರಣ್ಯಧಿಕಾರಿ ಆರ್.ಎಸ್.ಉಪ್ಪಾರ ನೇತೃತ್ವದಲ್ಲಿ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆಗೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎರಡು ಹುಲಿ ಉಗುರಿನ ಪೆಂಡೆಂಟ್ ವಶಕ್ಕೆ ಪಡೆದಿದ್ದಾರೆ. ಇನ್ನು ಉದ್ಯಮಿಗಳು ಇವು ನಕಲಿ‌ ಹುಲಿ ಉಗುರುಗಳು, ಅವುಗಳನ್ನು ಜಾತ್ರೆಯಲ್ಲಿ ಖರೀದಿ ಮಾಡಿದ್ದೇವೆ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *