ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ, ಜಗನ್ನಾಥ ಭವನದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಬೆಂಗಳೂರಿನ ಬಿಜೆಪಿ ಶಾಸಕರ ಸಭೆ ನಡೆಸಿದರು.ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಕಾರಿನ ಬಳಿಯೇ ಬಂದು ಬಿಜೆಪಿ ಶಾಸಕರು ಸ್ವಾಗತಿಸಿದರು.
ಶಾಸಕ ಉದಯ್ ಗರುಡಾಚಾರ್ ಬಿಎಸ್ವೈ ಕಾಲು ಮುಟ್ಟಿ ನಮಸ್ಕರಿಸಿದರು. ನಂತರ ಸುದೀರ್ಘ ಸಭೆ ನಡೆಸಲಾಯಿತು. ಬರ ಅಧ್ಯಯನ ಪ್ರವಾಸದ ಕುರಿತಾಗಿ ಸಮಾಲೋಚನೆ ನಡೆಯಿತು. ಇದೇ ವೇಳೆ ಸರ್ಕಾರದ ವೈಫಲ್ಯ, ಬರ ನಿರ್ವಹಣೆ ವೈಫಲ್ಯದ ವಿರುದ್ಧ ಹೋರಾಟ ನಡೆಸುವ ಕುರಿತು ಚರ್ಚಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





