ಜೈಪುರ: ಪೇಪರ್ ಲೀಕ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥರ ಪುತ್ರರಿಗೆ ಇಡಿ ಸಮನ್ಸ್ ನೀಡಿದೆ. ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗಾಗಿ ಕಳೆದ ವರ್ಷ ನಡೆದ ಪರೀಕ್ಷಾ ಪತ್ರಿಕೆಗಳ ಸೋರಿಕೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿದೆ. ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಸಾರಾ ಅವರ ಪುತ್ರರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.
ಮನಿ ಲಾಂಡರಿಂಗ್ ಪ್ರಕರಣ ರಾಜಸ್ಥಾನ ಪೊಲೀಸರು ಹಲವಾರು ಜನರ ವಿರುದ್ಧ ದಾಖಲಿಸಿದ ಪ್ರಥಮ ಮಾಹಿತಿ ವರದಿಗಳಿಂದ (ಎಫ್ಐಆರ್) ಹುಟ್ಟಿಕೊಂಡಿದೆ. ಆದರೆ ಕಾಂಗ್ರೆಸ್ ಮತ್ತು ಎಎಪಿ ಆಡಳಿತವಿರುವ ರಾಜ್ಯಗಳಲ್ಲಿ ವಿಷೇಶವಾಗಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇಡಿ ತೆಗೆದುಕೊಳ್ಳಲಾಗುತ್ತಿರುವ ಈ ಕ್ರಮವು ವಿವಾದ ಹುಟ್ಟುಹಾಕುವ ಸಾಧ್ಯತೆಯಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





