Breaking News

ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ವಿಚಾರಣೆ….

ನವದೆಹಲಿ: ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಉದ್ಯಮಿಯಿಂದ ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ವಿಚಾರಣೆ ನಡೆಯಲಿದೆ. ಸಂಸತ್ತಿನ ನೀತಿ ನಿಯಮಗಳ ಸಮಿತಿಯು ಈ ವಿಚಾರಣೆಯನ್ನು ಮಾಡಲಿದೆ. ತೃಣಮೂಲ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಜೆಪಿ ನಡುವಿನ ರಾಜಕೀಯ ಕೆಸರೆರಚಾಟಕ್ಕೆ ಈ ಆರೋಪವು ಕಾರಣವಾಗಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಮಹುವಾ ಮೊಯಿತ್ರಾ ಅವರು ಗುರುವಾರ ಲೋಕಸಭೆಯ ನೀತಿ ನಿಯಮಗಳ ಮುಂದೆ ಹಾಜರಾಗಲಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಎತ್ತುವುದಕ್ಕಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಮೊಯಿತ್ರಾ ಲಂಚ ಮತ್ತು ಹಣಕಾಸಿನ ಅನುಕೂಲಗಳನ್ನು ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಟಿಎಂಸಿ ಸಂಸದೆ ಮೊಯುತ್ರಾ ಆರೋಪಗಳನ್ನು ನಿರಾಕರಿಸಿದ್ದಾರೆ. ಆದರೆ, ತಮ್ಮ ಸಂಸತ್ತಿನ ಲಾಗಿನ್ ಐಡಿಯನ್ನು ಹಿರಾನಂದನಿ ಅವರೊಂದಿಗೆ ಹಂಚಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾರೆ.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *