ಬೆಂಗಳೂರು: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ನಡುವೆ ನಾಯಕತ್ವಕ್ಕಾಗಿ ಬಣಗಳ ಜಗ್ಗಾಟ ನಡೆಯುತ್ತಿದೆ. ಅದು ಈಗ ತಾರಕಕ್ಕೇರಿದೆ. ವರ್ಗಾವಣೆ ದಂಧೆ ಮುಂದುವರೆದಿದೆ. ಉಪ ಮುಖ್ಯಮಂತ್ರಿ ಉಪಟಳಕ್ಕೆ ಕಡಿವಾಣ ಹಾಕಲು ಡಿನ್ನರ್ ಮೀಟಿಂಗ್ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾವೇರಿ ಜಲ ನ್ಯಾಯಮಂಡಳಿ ಮುಂದೆ ನೀರಿನ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸಲು ವಿಫಲವಾಗಿದೆ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ಇದರಿಂದ ಕುಡಿಯುವ ನೀರಿನ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಎಂದು ಹೇಳಿದರು.
ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾವೇರಿ ಜಲ ನ್ಯಾಯಮಂಡಳಿ ಮುಂದೆ ನೀರಿನ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸಲು ವಿಫಲವಾಗಿದೆ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ಇದರಿಂದ ಕುಡಿಯುವ ನೀರಿನ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಎಂದು ಹೇಳಿದರು.