Breaking News

ಸಿಸಿಬಿ ಪೊಲೀಸರ ಕಾರ್ಯಕ್ಕೆ ಆರೋಪಿ ಜೈಲಿಗೆ

ಹುಬ್ಬಳ್ಳಿ: ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಅಕ್ರಮವಾಗಿ ಬೇರೆ ರಾಜ್ಯದಿಂದ ಸಾರಾಯಿ ತಂದು ಮಾರಾಟ ಮಾಡುತ್ತಿದ್ದ ಖತರ್ನಾಕ್ ಆಸಾಮಿಯನ್ನು ಸಿಸಿಬಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.

ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ವಿಶ್ವೇಶ್ವರ ನಗರದ ಶ್ರೀಕಾಂತಯ್ಯ ಹಿರೇಮಠ ಎಂಬಾತ ತನ್ನ ಎಲ್ಲೋ ಬೋರ್ಡ್ ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯ ತಂದು ನಗರದಲ್ಲಿ ಮಾರಾಟ ಮಾಡುವ ಕಾಯಕವನ್ನು ನಡೆಸಿದ್ದ.‌

ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಸಿಸಿಬಿ ಇನ್ಸೆಕ್ಟರ್ ಗುಳಾರಿ ನೇತೃತ್ವದ ತಂಡ ಶ್ರೀಕಾಂತಯ್ಯ ದೇಶಪಾಂಡೆ ನಗರದ ಗುಜರಾತ್ ಭವನದ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದಾಗ ದಾಳಿ ಮಾಡಿದಾಗ ಕಾರ್‌ನಲ್ಲಿ ಗೋವಾ ರಾಜ್ಯದ 35 ಲೀಟರ್ ಅಕ್ರಮ ಮದ್ಯ ಪತ್ತೆಯಾಗಿದೆ. ಈ ಹಿನ್ನೆಲೆ ಕಾರ್ ಹಾಗೂ ಸಾಗಾಟ ಮಾಡಲು ಬಳಸುತ್ತಿದ್ದ ಕಾರನ್ನು ಸೀಜ್ ಮಾಡಿದ್ದಾರೆ.

ಸದ್ಯ ಆರೋಪಿಯಿಂದ 30 ಸಾವಿರ ಮೌಲ್ಯದ ಮದ್ಯ ಹಾಗೂ ಕಾರನ್ನು ಸೇರಿ 6,55760 ರೂಪಾಯಿ ಮೌಲ್ಯದ ಸಾಮಗ್ರಿಗಳನ್ನು ವಶಕ್ಕೆ ಪಡೆದು ಆರೋಪಿಯ ಮೇಲೆ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಜೈಲಿಗೆ ಅಟ್ಟಿದ್ದಾರೆ. ಸಿಸಿಬಿ ಪೊಲೀಸರ ಕಾರ್ಯಕ್ಕೆ ಇದೀಗ ಹಿರಿಯ ಅಧಿಕಾರಿಗಳು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *