Breaking News

ಸಿದ್ದು ಬಗ್ಗೆ ಗುಣಗಾನ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದ ‘ರೈತ ಸಾಂತ್ವನ ಯಾತ್ರೆ’ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತ ಮಾಡಿದ್ದರು. ಈ ಕುರಿತು ಭಾನುವಾರ ಅವರು ಪೋಸ್ಟ್ ಹಾಕಿದ್ದರು.

ಸೋಮವಾರ ಈ ಪೋಸ್ಟ್‌ಗೆ ಎಚ್. ಡಿ. ಕುಮಾರಸ್ವಾಮಿ ಉತ್ತರ ನೀಡಿದ್ದಾರೆ. ‘ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ‘ಹೃದಯ ವೈಶಾಲ್ಯತೆ’ಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ‘ದೊಡ್ಡ’ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ’ ಎಂದು ಟ್ವೀಟ್ ಮಾಡಿದ್ದಾರೆ.

Share News

About BigTv News

Check Also

ಸ್ಥಗಿತಗೊಂಡ ಗರಡಿಮನೆ ತಾಲೀಮು: ನಿರ್ವಹಣೆಯಿಲ್ಲದೇ ಕಣ್ಮರೆಯಾದ 150 ಗರಡಿಮನೆ..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಗರಡಿಮನೆ ತಾಲೀಮು ಅಂದರೇ ಅದೊಂದು ಗತ್ತು ಗಾಂಭಿರ್ಯ ಇರುತ್ತಿತ್ತು. ಧಾರವಾಡದ ಪೈಲ್ವಾನರು ಅಂದರೆ ಕೊಲ್ಹಾಪುರ, ಪುಣೆ, …

Leave a Reply

Your email address will not be published. Required fields are marked *

You cannot copy content of this page