ಬೆಂಗಳೂರು: ಕಾಂಗ್ರೆಸ್ ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ದಿವಾಳಿ ಮಾಡಲು ಅಧಿಕಾರಕ್ಕೆ ಬಂದಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸುವ ಜೊತೆ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುತ್ತಿರುವುದು ನಿಜಕ್ಕೂ ಆತಂಕಕಾರಿ ಎಂದು ರಾಜ್ಯ ಬಿಜೆಪಿ ಟ್ವೀಟ್ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲಿಂದ ನೇಕಾರರ ಬದುಕಿಗೆ ಮರಣ ಶಾಸನ ಬರೆಯುತ್ತಿದೆ ಎಂಬುದಕ್ಕೆ ತುಮಕೂರು ಜಿಲ್ಲೆಯೊಂದರಲ್ಲೇ 150ಕ್ಕೂ ಹೆಚ್ಚು ನೇಕಾರರ ಕುಟುಂಬಗಳು ಬೀದಿಗೆ ಬಿದ್ದಿರುವುದು ತಾಜಾ ನಿದರ್ಶನ. ಕಾಂಗ್ರೆಸ್ ಸರ್ಕಾರ ತಂದೊಡ್ಡಿರುವ ವಿದ್ಯುತ್ ಲೋಡ್ಶೆಡ್ಡಿಂಗ್ ಕೃಪೆಯಿಂದಾಗಿ ಪಾರಂಪರಿಕ ನೇಕಾರಿಕಾ ಕಲೆಗಾರಿಕೆಗೂ ನಶಿಸುವ ಅಪಾಯ ತಲೆದೋರುತ್ತಿದೆ. ಇಷ್ಟೆಲ್ಲಾ ಆಗುತ್ತಿದ್ದರೂ ಇಂಧನ ಸಚಿವ ಕೆ ಜೆ ಜಾರ್ಜ್ ಮಾತ್ರ ಕರೆಂಟ್ ಇಲ್ಲದ ಕತ್ತಲಿನಲ್ಲಿ ಕಾಣೆಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





