ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಬೆನ್ನಲೇ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ ನೀಡಿದೆ. ಜಯನಗರ ಬಿಡಿಎ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ತೆರವು ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದ್ದು ವ್ಯಾಪಾರ ವಹಿವಾಟು ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳು ಅತಂತ್ರ ಸ್ಥಿತಿ ಎದುರಿಸಬೇಕಾಗಿದೆ.ಫುಟ್ಪಾತ್ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವುಗೊಳಿಸಲು ಸಜ್ಜಾಗಿದೆ.
ಹಬ್ಬದ ಸಂದರ್ಭದಲ್ಲಿ ಬಂಪರ್ ಮಾರಾಟಕ್ಕಾಗಿ ಎದುರು ನೋಡುತ್ತಿದ್ದ ಮಾರಾಟಗಾರು ಅತಿಕ್ರಮಣ ಫುಟ್ಪಾತ್ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಪುನರುಚ್ಚರಿಸಿದ್ದಾರೆ.. ಬಿಬಿಎಂಪಿ ಮಾರ್ಷಲ್ಗಳ ತಂಡ ಸ್ಥಳಕ್ಕೆ ಆಗಮಿಸಿ, ಬೀದಿಬದಿ ವ್ಯಾಪಾರಿಗಳನ್ನು ಫುಟ್ಪಾತ್ನಿಂದ ತೆರವುಗೊಳಿಸಲಿದ್ದಾರೆ.ಜಾಗ ಖಾಲಿ ಮಾಡಲು ಕೊನೆಯ ಅವಕಾಶ ನೀಡಲಾಗುತ್ತದೆ ಎಂದು ಬಿಬಿಎಂಪಿ ಘೋಷಿಸಿದೆ