ಚಿತ್ರದುರ್ಗ, ನವೆಂಬರ್ 07: ಕೆಲಸ ಮಾಡದೇ ಕೇಂದ್ರ ಸರ್ಕಾರದ ಕಡೆ ಬೆರಳು ಮಾಡುವ ಕಾಂಗ್ರೆಸ್ ಸರ್ಕಾರದ ಕೆಲಸ ಬೇಜವಾಬ್ದಾರಿತನದ ಪರಮಾವಧಿ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಚಿತ್ರದುರ್ಗ ಜಿಲ್ಲೆಗೆ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರ ನೇತೃತ್ವದ ಬರ ಅಧ್ಯಯನ ತಂಡ ಆಗಮಿಸಿದ್ದು, ಜಿಲ್ಲೆಯ ಕೊಳಾಳ್ ಗ್ರಾಮದಿಂದ ಬರ ಅಧ್ಯಯನ ಪ್ರಾರಂಭಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದಿಂದ ಬರ ಪರಿಹಾರಕ್ಕೆ ಪರಿಹಾರ ನೀಡಲಿ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯೆಗೆ ಉತ್ತರಿಸಿದ ಅವರು ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಜನಪರ ಕಾಳಜಿ ಇದೆ. ಕೇಂದ್ರ ತಂಡ ಬಂದು ಈಗಾಗಲೇ ಬರ ಬಗ್ಗೆ ಅಧ್ಯಯನ ನಡೆಸಿ, ಕೇಂದ್ರ ಸರ್ಕಾರಕ್ಕೆ ವರದಿ ನೀಡಿದೆ ಎಂದರು.
ರಾಜ್ಯದಲ್ಲಿ ಜನ ಆರಿಸಿರುವುದು ಕಾಂಗ್ರೆಸ್ ಸರ್ಕಾರವನ್ನು, ಈ ಸರ್ಕಾರ ತಾನೇನು ಮಾಡುತ್ತಿದೆ ಎನ್ನುವುದನ್ನು ಹೇಳಲಿ. ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರ ಅಂತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





