Breaking News

ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ…

ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಮತ್ತೊಮ್ಮೆ ಗಂಭೀರ ಆರೋಪ ಮಾಡಿ ಪಂಚರಾಜ್ಯ ಚುನಾವಣೆ ಅಖಾಡದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಛತ್ತೀಸ್‌ಗಢ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಇಂದು ಮೊದಲ ಹಂತದ ಮತದಾನ ನಡೆದಿದೆ. ನವೆಂಬರ್ 17ಕ್ಕೆ 2ನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ಕೂಡ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಛತ್ತೀಸ್‌ಗಢದ ನೆಲದಲ್ಲಿ ನಿಂತು ಕಾಂಗ್ರೆಸ್ ವಿರುದ್ಧ ಹೇಳಿದ್ದೇನು ಗೊತ್ತಾ?

ಮೊನ್ನೆ ಮೊನ್ನೆ ತಾನೆ ಸಿಎಂ ಸಿದ್ದರಾಮಯ್ಯ ಹಾಗೂ ಕರ್ನಾಟಕದ ಕಾಂಗ್ರೆಸ್ ವಿರುದ್ಧವೂ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು. ಈ ಮೂಲಕ ಕರ್ನಾಟಕದಲ್ಲಿ ಅಧಿಕಾರ ಪಡೆದ ಕಾಂಗ್ರೆಸ್, ಸಿಎಂ ಸ್ಥಾನಕ್ಕೆ ಕಿತ್ತಾಡುತ್ತಿದೆ ಎಂದು ಆರೋಪಿಸಿದ್ದರು. ಅಲ್ಲದೆ ಭ್ರಷ್ಟಾಚಾರವು ತಾಂಡವ ಆಡುತ್ತಿದೆ ಎಂದು ಪಿಎಂ ಮೋದಿ, ಸಿದ್ದರಾಮಯ್ಯ ಅವರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು.

ಹೀಗೆ ಪ್ರಧಾನಿ ಮೋದಿ ಅವರು ಹಾಗೂ ಸಿಎಂ ಸಿದ್ದರಾಮಯ್ಯರ ಮಧ್ಯೆ ಫೈಟ್ ಜೋರಾದ ಸಮಯದಲ್ಲಿ. ಸಿಎಂ ಸಿದ್ದರಾಮಯ್ಯ ಕೂಡ ಪ್ರಧಾನಿ ಮೋದಿಗೆ ತಿರುಗೇಟು ನೀಡಿದ್ದರು. ಇಷ್ಟೆಲ್ಲಾ ಘಟನೆ ಬೆನ್ನಲ್ಲೇ, ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಈಗ ಮತ್ತೊಂದು ಗಂಭೀರ ಆರೋಪ ಹೊರಿಸಿದ್ದಾರೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *