ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಬಣದ ರಾಜಕಾರಣ ಆರಂಭವಾಗಿದೆ. ಇದೀಗ ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು ಆಗಿದೆ ಎಂದು ಶಾಸಕ ಮಹೇಶ ತೆಂಗಿನಕಾಯಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಯಾವುದೇ ರೀತಿಯ ಆಪರೇಷನ್ ಕಮಲ ಮಾಡಿಲ್ಲ. ಜನರು ಬಿಜೆಪಿಗೆ ವಿಪಕ್ಷ ಸ್ಥಾನ ಕೊಟ್ಟಿದ್ದಾರೆ. ಹೀಗಾಗಿ ರಚನಾತ್ಮಕ ಹೋರಾಟ ಮಾಡತ್ತೇವೆ. ಕಾಂಗ್ರೆಸ್’ನವರು ಆಪರೇಷನ್ ಹಸ್ತದಲ್ಲಿ ಹಸ್ತ ಮಾಡಿಕೊಳ್ಳುವ ಕೆಲಸವನ್ನು ಅವರೇ ಮಾಡಿಕೊಂಡಿದ್ದಾರೆ ಎಂದರು.
ಸದ್ಯ ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು ಆಗಿದೆ. ಕಾಂಗ್ರೆಸ್ ಬಣ ರಾಜಕೀಯದಲ್ಲಿ ಮುಳುಗಿದೆ. ಸದ್ಯ ಡಿಕೆಶಿ, ಸಿದ್ದರಾಮಯ್ಯ, ಪರಮೇಶ್ವರ ಹಾಗೂ ಸತೀಶ ಜಾರಕಿಹೊಳಿ ಎಂಬ ಬಣಗಳಿವೆ. ಇದರಲ್ಲಿ ಸಿಎಂ ಗಾದೆ ಬಗ್ಗೆ ಚರ್ಚೆ ಆರಂಭವಾಗಿದೆ. ಆದರೆ ನಾವು ಟೀಕೆ ಮಾಡಿಲ್ಲ ಎಂದು ತಿಳಿಸಿದರು. ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರತ್ತಾರೆಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಒಬ್ಬ ಶಾಸಕರು ಬಿಜೆಪಿಯಿಂದ ಕಾಂಗ್ರೆಸ್’ಗೆ ಹೋಗೋದಿಲ್ಲ. ಮಾರ್ಚ್ ಎಪ್ರಿಲ್ ವರೆಗೆ ನೋಡಿ ರಾಜಕೀಯ ಬೆಳವಣಿಗೆ ಗೊತ್ತು ಆಗುತ್ತದೆ ಎಂದರು.
ರಾಜ್ಯದಲ್ಲಿ ಮತ್ತೆ ಮತಾಂತರ ಕಾರ್ಯ ನಡೆಯುತ್ತಿದೆ. ಹೀಗಾಗಿಯೇ ಮತಾಂತರ ನಿಷೇಧ ಕಾಯಿದೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಸಿಎಂ ಸಿದ್ದರಾಮಯ್ಯ ಅವರ ಸಮೂದಾಯದ ಬಾಲಕನನ್ನು ಕೋಲಾರದಲ್ಲಿ ಮತಾಂತರ ಮಾಡಲಾಗುತ್ತಿದೆ ಎಂಬ ಮಾಹಿತಿ ಇದೆ. ಈ ಬಗ್ಗೆ ದೂರು ಕೂಡಾ ದಾಖಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಮತಾಂತರಕ್ಕೆ ಪ್ರೋತ್ಸಾಹ ಮಾಡತ್ತೀರಾ, ವಿರೋಧ ಮಾಡತ್ತೀರಾ ಎಂಬುದನ್ನು ತಿಳಿಸಲಿ ಎಂದು ಒತ್ತಾಯ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





