ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗಿದೆ. ಒಂದೊಂದೇ ಪಕ್ಷಗಳು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿವೆ. ಈ ಪೈಕಿ ಬಿಜೆಪಿ ಅಂತಿಮಗೊಂಡ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಇತ್ತೀಚೆಗೆ ಬಿಡುಗಡೆ ಮಾಡಿತು. ಆದರೆ ಪಟ್ಟಿಯಲ್ಲಿ ಪಕ್ಷದ ಹಿರಿಯ ನಾಯಕಿ, ಮಾಜಿ ಸಂಸದೆಯ ಹೆಸರನ್ನು ಕೈ ಬಿಡಲಾಗಿದೆ. ಇದು ಮುಂದಿನ ರಾಜಕೀಯ ಬೆಳವಣಿಗೆಗಳತ್ತ ಕೌತುಕ ಮೂಡಿಸಿದೆ.
ಇದೇ ನವೆಂಬರ್ 30 ರಂದು ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಭಾರತೀಯ ಜನತಾ ಪಕ್ಷವು 12 ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಮೂಲಕ ಬಿಜೆಪಿಯ ಒಟ್ಟು 100 ಅಭ್ಯರ್ಥಿಗಳು ಕಣದಲ್ಲಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಸದ್ಯ ಬಿಜೆಪಿಯಿಂದ ಉಳಿದ 19 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವುದು ಬಾಕಿ ಇದೆ. ಇದಕ್ಕೆ ನಟ-ರಾಜಕಾರಣಿ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ದೊಂದಿಗೆ ಚರ್ಚಿಸಿ ನಂತರ 8-9 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





