ಚಾಮರಾಜನಗರ: ಬೆಳಕಿನ ಹಬ್ಬ ದೀಪಾವಳಿಯನ್ನು ಇಡೀ ದೇಶಾದ್ಯಂತ ಆಚರಣೆ ಮಾಡಲು ಜನರು ಕಾತರದಿಂದ ಕಾಯುತ್ತಿದ್ದರೇ, ಚಾಮರಾಜನಗರ ಜಿಲ್ಲೆಯ ಈ 6 ಊರುಗಳು ಮಾತ್ರ ಹಬ್ಬವನ್ನು ಒಂದು ವಾರ ಮುಂದಕ್ಕೆ ಹಾಕಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಏನೆಂದು ಇಲ್ಲಿ ತಿಳಿಯಿರಿ. ಗುಂಡ್ಲುಪೇಟೆ ತಾಲೂಕಿನ 6 ಗ್ರಾಮಗಳಲ್ಲಿ ಹಬ್ಬದ ಸಂತಸವೇ ಇಲ್ಲ. ಕಾರಣ ಈ ಬಾರಿ ಹಬ್ಬ ಮಂಗಳವಾರ ಬಂದಿರುವುದು. ಗುಂಡ್ಲುಪೇಟೆ ತಾಲೂಕಿನ ವೀರನಪುರ, ಬನ್ನಿತಾಳಪುರ, ಇಂಗಲವಾಡಿ, ಮಾಡ್ರಹಳ್ಳಿ, ಮಳವಳ್ಳಿ ಹಾಗೂ ನೇನೆಕಟ್ಟೆ ಗ್ರಾಮಗಳಲ್ಲಿ ದೀಪಾವಳಿಯ ಬಲಿ ಪಾಡ್ಯಮಿ ಬುಧವಾರ ಬಂದರೆ ಮಾತ್ರ ಹಬ್ಬ ಆಚರಿಸಲಿದ್ದು, ಇಲ್ಲದಿದ್ದರೆ ಮುಂದಿನ ಬುಧವಾರವೇ ಬೆಳಕಿನ ಹಬ್ಬವನ್ನು ಆಚರಿಸುತ್ತಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





