Breaking News

ಪಟಾಕಿ ಸಿಡಿಸುವಾಗ ತೊಂದರೆ ಆಗದಂತೆ ಸಿಡಿಸಿ….

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಆರಂಭವಾಗಿದೆ. ಜನರು ಹಬ್ಬವನ್ನು ಆಚರಣೆ ಮಾಡಲು ಪಟಾಕಿ ಸಿಡಿಸುತ್ತಿದ್ದಾರೆ. ಪಟಾಕಿ ಮಾರಾಟ ಮತ್ತು ದಾಸ್ತಾನು ಕುರಿತು ಜನರಲ್ಲಿ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ. ಹಸಿರು ಪಟಾಕಿ ಸಿಡಿಸಿ, ಪರಿಸರ ರಕ್ಷಣೆ ಸಹಕರಿಸಿ ಎಂದು ಮನವಿ ಮಾಡಲಾಗಿದೆ.ಜನರು ಸುಪ್ರೀಂಕೋರ್ಟ್ ಆದೇಶದಂತೆ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಉಳಿದ ಪಟಾಕಿಗಳನ್ನು ಬಳಕೆ ಮಾಡಬಾರದು. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಕರೆ ಕೊಡಲಾಗಿದೆ.ಪಟಾಕಿ ಸಿಡಿಸುವಾಗ ಪಟಾಕಿ ಬಳಸುವಾಗ ಪ್ರಾಣಿ-ಪಕ್ಷಿಗಳು, ಮಕ್ಕಳು ಮತ್ತು ವೃದ್ದರಿಗೆ ತೊಂದರೆಯಾಗದಂತೆ ಬಳಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆ ಸುತ್ತಮುತ್ತ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಪಟಾಕಿ ಹಚ್ಚಬಾರದು ಎಂದು ಸೂಚನೆ ನೀಡಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *