ಮಂಡ್ಯ: ಕುಮಾರಸ್ವಾಮಿ ಅವರು ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೆ ಮಾತನಾಡುತ್ತಿದ್ದಾರೆ. ಅವರ ರೀತಿ ಮಾತನಾಡೋದು ಸರಿ ಅಂದರೆ ನಾನೂ ಸಹ ಅವರಪ್ಪನ ತರ ಮಾತನಾಡುತ್ತೇನೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಗುಡುಗಿದರು.ಮಳವಳ್ಳಿ ತಾಲೂಕು ಹಲಗೂರಿನಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಲಿ, ಅವರ ಬಳಿ ಇರುವ ಪೆನ್ಡ್ರೈವ್ ಬಿಡುಗಡೆ ಮಾಡುತ್ತೇನೆ ಎಂದಿದ್ದರು. ಆದರೆ ಯಾವ ಸಚಿವರು ಕರೆ ಮಾಡಿ ದಾಖಲೆ ಬಿಡುಗಡೆ ಮಾಡಬೇಡಿ ಎಂದು ಹೇಳಿದ್ದಾರೆನ್ನುತ್ತಾರೆ. ಅವರ ಬಳಿ ಇರುವುದು ಪೆನ್ಡ್ರೈವ್ ಅಲ್ಲ. ಪೆನ್ಸಿಲ್ ಡ್ರೈವ್. ಇರೋದು ಅಳಿಸಿ ಹೋಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





