ಜೈಪುರ: ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಆಪ್ತ ರಾಜಪಾಲ್ ಸಿಂಗ್ ಶೆಖಾವತ್ ಅವರನ್ನು ರಾಜಸ್ಥಾನದ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಮಾಡಿದ್ದರಿಂದ ಬಿಜೆಪಿಯಲ್ಲಿ ಬಂಡಾಯ ನಾಯಕರ ಪಡೆಗೆ ಸೇರ್ಪಡೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಬಾರಿ ವಿಧಾನಸಭಾ ಚುನಾವಣೆ ಗೆಲ್ಲುವ ಸಲುವಾಗಿ ಬಿಜೆಪಿ ಹಲವಾರು ಮಂದಿ ನಾಯಕರನ್ನು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಾಡಿದೆ. ಅಲ್ಲದೆ ನವೆಂಬರ್ 25 ರಂದು ಅಧಿಕೃತ ಅಭ್ಯರ್ಥಿಗಳ ಗೆಲುವಿಗಾಗಿ ಕೆಲಸ ಮಾಡಲು ಮನವೊಲಿಸಲು ಪ್ರಯತ್ನಿಸುತ್ತಿದೆ. ಆದರೆ ಇದಕ್ಕೆ ಪಕ್ಷದಲ್ಲಿ ಬಂಡಾಯದ ವಾತಾವರಣ ಸೃಷ್ಟಿಯಾಗಿದೆ.ಗೃಹ ಸಚಿವ ಅಮಿತ್ ಶಾ ಅವರ ವೈಯಕ್ತಿಕ ಮನವಿಯ ನಂತರ ರಾಜ್ಪಾಲ್ ಮಾಜಿ ಕೇಂದ್ರ ಸಚಿವ ರಾಜ್ಯವರ್ಧನ್ ರಾಥೋಡ್ ವಿರುದ್ಧ ಜೋತ್ವಾರಾದಲ್ಲಿ ಕಣದಿಂದ ಹಿಂದೆ ಸರಿದಿದ್ದಾರೆ. ಆದರೆ ಮತ್ತೊಬ್ಬ ಬಂಡಾಯಗಾರ ಅಶು ಸಿಂಗ್ ಸುರಪುರ ಅವರು ಕ್ಷೇತ್ರದಿಂದ ಹಿಂದೆ ಸರಿಯಲು ಒಪ್ಪದೆ ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





