ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭಾರದಿಂದ ಆದಾಯ ಹೊಂದಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇಂತಹ ಸಂದರ್ಭದಲ್ಲಿಯೇ ದಂಡ, ಸೆಸ್ ಹೆಚ್ಚಿಸಿ ಎಂದು ಸರ್ಕಾರಕ್ಕೆ ಶಿಫಾರಸು ಸಲ್ಲಿಕೆಯಾಗಿದೆ. ಸರ್ಕಾರ ಈ ಶಿಫಾರಸು ಒಪ್ಪಲಿದೆಯೇ? ಕಾದು ನೋಡಬೇಕಿದೆ.ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ 6ನೇ ವರದಿಯನ್ನು ಸಲ್ಲಿಕೆ ಮಾಡಿದೆ. ಸರ್ಕಾರದ 7 ಇಲಾಖೆಗಳ 882 ಶಿಫಾರಸುಗಳನ್ನು ಸಲ್ಲಿಸಿದೆ. ಇಲಾಖೆಗಳ ಆದಾಯ ವೃದ್ಧಿಗೆ ಹಲವು ಶಿಫಾರಸುಗಳನ್ನು ಮಾಡಲಾಗಿದೆ.ಸರ್ಕಾರ ಎಲ್ಲಾ ಇಲಾಖೆಗಳ ಆಡಳಿತ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ವರದಿ ನೀಡುವಂತೆ 2ನೇ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಶನಿವಾರ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯಗೆ ವರದಿ ಸಲ್ಲಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





