ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿಗಳೇ ಗ್ರಾಹಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಐ.ಜಿ.ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಶಾಖೆಯಲ್ಲಿ ಈ ವಂಚನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿದೆ.ಆರೋಪಿಗಳು ಗ್ರಾಹಕರ ಚಿನ್ನವನ್ನು ಮಾರಾಟ ಮಾಡಿ ನಕಲಿ ಚಿನ್ನವನ್ನು ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





