Breaking News

ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ: ಡಿ ಕೆ ಶಿವಕುಮಾರ್‌.

ಬೆಂಗಳೂರು: ತೆಲಂಗಾಣ ವಿಧಾನಸಭಾ ಎಕ್ಸಿಟ್‌ ಪೋಲ್‌ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂದು ತಿಳಿಸಿದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳುಲು ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ತೆಲಂಗಾಣದತ್ತ ಮುಖ ಮಾಡಿದ್ದಾರೆ. ತೆಲಂಗಾಣಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜೊತೆಗೆ ಸದಾಶಿವನಗರದಲ್ಲಿ ಡಿ ಕೆ ಶಿವಕುಮಾರ್‌ ಮಾತನಾಡಿ,ಚುನಾವಣೆ ಕಾರಣ ತೆಲಂಗಾಣಕ್ಕೆ ಹೋಗುತ್ತಿದ್ದು, ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ತೆಲಂಗಾಣ ಚುನಾವಣೆ ಫಲಿತಾಂಶ ಬರುವ ಹಿನ್ನೆಲೆಯಲ್ಲಿ ತಾವು ತೆರಳುತ್ತೀರಾ ಎಂಬ ಪ್ರಶ್ನೆಗೆ ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ.

ಇನ್ನೂ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸ ನನಗಿದೆ. ಶಾಸಕರು ಎಲ್ಲೂ ಹೋಗುವುದಿಲ್ಲ. ಅವರನ್ನು ರಕ್ಷಣೆ ಮಾಡುವ ಅಗತ್ಯವಿಲ್ಲ. ಆ ಬಗ್ಗೆ ನನಗೆ ಇದುವರೆಗೂ ಯಾವುದೇ ಜವಾಬ್ದಾರಿ ನೀಡಿಲ್ಲ. ತೆಲಂಗಾಣ ಸೇರಿದಂತೆ ಕೆಲವು ಕಡೆ ನಮ್ಮ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ನಮ್ಮ ಪಕ್ಷದವರು ಸ್ಥಳೀಯ ಮಟ್ಟದಲ್ಲೇ ಇದನ್ನು ನಿಭಾಯಿಸುತ್ತಾರೆ ಎಂದು ಹೇಳಿದರು.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *