ನವದೆಹಲಿ: 5 ರಾಜ್ಯಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ. ಗೆಲ್ಲುವ ಶಾಸಕರನ್ನು ಅನ್ಯ ಪಕ್ಷಗಳ ನಾಯಕರು ಸೆಳೆಯುವ ಸಂಭವವಿರುವುದರಿಂದ ಈ ಎಲ್ಲ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ತೆಲಂಗಾಣದಲ್ಲಿ ಈಗಾಗಲೇ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎನ್ನಲಾಗಿದ್ದು, ಹಾಲಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ಗೆಲ್ಲಬಹುದಾದ ಶಾಸಕರಿಗೆ ದೂರವಾಣಿ ಕರೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ಖುದ್ದಾಗಿ ತೆಲಂಗಾಣಕ್ಕೆ ಹೋಗುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಕೆ ಚಂದ್ರಶೇಖರ್ ರಾವ್ ಅವರಿಗೆ ಕರೆ ಸ್ವೀಕರಿಸಿರುವ ಶಾಸಕರೊಬ್ಬರು ನಮ್ಮನ್ನು ತಮ್ಮಡೆಗೆ ಬರುವಂತೆ ಕರೆಯಲಾಗುತ್ತಿದೆ ಎಂದು ಹೇಳಿದ್ದಾರೆ. ಇದು ಎಲ್ಲ ರಾಜ್ಯಗಳಲ್ಲೂ ನಡೆಬಹುದಾಗಿದ್ದು, ಈ ನಿಟ್ಟಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲ ನಾಯಕರು ಎಚ್ಚರಿಕೆಯಿಂದಿರಬೇಕು. ಚುನಾವಣಾ ರಾಜ್ಯಗಳ ವೀಕ್ಷಕರಿಗೆ ಮತ ಎಣಿಕೆಯ ಮೇಲೆ ನಿಗಾ ಇಡುವಂತೆ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





