ಭೋಪಾಲ್: ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ 163 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮರಳಿ ಅಧಿಕಾರವನ್ನು ಪಡೆದಿದೆ. ರಾಜ್ಯದ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲು ಎಲ್ಲರೂ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಕಮಲ್ ನಾಥ್ ನಾಯಕತ್ವ ಕಾರಣ ಎಂದು ದೂರುತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಅವರು ತಳ ಮಟ್ಟದ ಅಲೆಯನ್ನು ಅರಿಯಲು ವಿಫಲವಾದರೆ?. ಸದ್ಯದ ಮಾಹಿತಿ ಪ್ರಕಾರ ಪಕ್ಷದ ಹೈಕಮಾಂಡ್ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





