ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡಿದ್ದಾರೆ. ಇದರ ಜೊತೆ ಈಗ ಮುಸ್ಲಿಂ ಸಮುದಾಯದ ಮುಖಂಡರು ಕೂಡ ಗರಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ, ಬಿಜೆಪಿ ನಾಯಕ ಎಡವಟ್ಟು ಮಾಡಿಕೊಂಡ್ರ? ಅನ್ನೋ ಅನುಮಾನ ಕೂಡ ಚರ್ಚೆಗೆ ಗ್ರಾಸವಾಗಿದೆ. ಹಾಗಾದರೆ ಮುಸ್ಲಿಂ ಸಮುದಾಯದ ಮುಖಂಡರು, ಈಗ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರೊಚ್ಚಿಗೆದ್ದಿದ್ದು ಯಾಕೆ?
ಬಸನಗೌಡ ಪಾಟೀಲ್ ಯತ್ನಾಳ್ ಹುಚ್ಚರಂತೆ ವರ್ತನೆ ಮಾಡುತ್ತಿದ್ದಾರೆ. ಈ ವಿಷಯ ಕೇಳಿ ನನಗೆ ಆಶ್ಚರ್ಯ ಆಗಿದೆ ಅಂತ ಹುಬ್ಬಳ್ಳಿಯಲ್ಲಿ ಮಾಜಿ ಸಚಿವ & ಮುಸ್ಲಿಂ ಧರ್ಮ ಗುರುಗಳ ಸಮಾವೇಶದ ಉಸ್ತುವಾರಿ ಎ.ಎಮ್. ಹಿಂಡಸಗೇರಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿಯ ಶಾಸಕ ಹಾಗೂ ಉತ್ತರ ಕರ್ನಾಟಕದ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಎ.ಎಮ್. ಹಿಂಡಸಗೇರಿ ಹೀಗೆ ಪ್ರತಿಕ್ರಿಯೆ ನೀಡಿದ್ದು, ಯತ್ನಾಳ್ ಅವರಿಗೆ ಸವಾಲನ್ನೂ ಹಾಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





