ಬೆಳಗಾವಿ: ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿಯನ್ನು ಭದ್ರವಾಗಿಸಿಕೊಳ್ಳಿ. ನಮ್ಮನ್ನು ಗಮನಿಸುವ ಭರದಲ್ಲಿ ನಿಮ್ಮ ಕಾಳಜಿಯನ್ನು ಮಾಡದೇ ಇರಬೇಡಿ ಎಂದು ಎಚ್ಚರಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಎಚ್ಚರಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಹಾಗಿರಲಿ, ಬಿಕೆ ಹರಿಪ್ರಸಾದ್ “ಯಾರೋ ಹೊರಗಿನ ಬಂದವರು” ಅಂತ ಬೈತಿದ್ದು ಟಿವಿಯಲ್ಲಿ ನೋಡಿದೆ. ಮೂಲ ಕಾಂಗ್ರೆಸ್ಸಿಗರು ನಿಮ್ಮನ್ನು ಹೊರಗೆ ಹಾಕಲು ಸಂಚು ರೂಪಿಸುತ್ತಿರುವಂತೆ ಇದೆ ನೋಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





