ಭಾರತ ದೇಶದ ಪ್ರಜಾಪ್ರಭುತ್ವದ ಗರ್ಭಗುಡಿ ಸಂಸತ್ಗೆ ಅಪರಿಚಿತರು ನುಗ್ಗಿದ ನಂತರ ಭಾರಿ ಸಂಚಲನ ಸೃಷ್ಟಿಯಾಗಿದೆ. ಅದರಲ್ಲೂ ಆರೋಪಿಗಳು ಕರ್ನಾಟಕ ಸಂಸದ ಪ್ರತಾಪ್ ಸಿಂಹರ ಹೆಸರು ಉಲ್ಲೇಖಿಸಿ ವಿಸಿಟರ್ ಪಾಸ್ ಪಡೆದು ಸಂಸತ್ತಿಗೆ ಪ್ರವೇಶಿಸಿದ್ದಾರೆ ಎಂಬ ಸುದ್ದಿ ಬಿರುಗಾಳಿ ಎಬ್ಬಿಸಿದೆ. ಇದೇ ವಿಚಾರ ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳು ಬಿಜೆಪಿ ವಿರುದ್ದ ಕೂಡ ಹೋರಾಟ ಆರಂಭಿಸಿವೆ. ಹೀಗಿದ್ದಾಗ ಕರ್ನಾಟಕ ಕಾಂಗ್ರೆಸ್ ಸ್ಫೋಟಕ ಆರೋಪ ಮಾಡಿದೆ.
ಸೋಷಿಯಲ್ ಮೀಡಿಯಾ ಸೇರಿ ದೇಶದ ವಿವಿಧೆಡೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಆಕ್ರೋಶದ ಬಿರುಗಾಳಿ ಎದ್ದಿದೆ. ಹೀಗೆ ಅಪರಿಚಿತರು ಸಂಸತ್ ಭವನದ ಒಳಗೆ ನುಗ್ಗಲು ಪ್ರತಾಪ್ ಸಿಂಹ ಅವರೇ ಪ್ರಮುಖ ಕಾರಣ ಅಂತ ಆರೋಪ ಮಾಡುತ್ತಿದೆ ಕಾಂಗ್ರೆಸ್. ಈ ಮೂಲಕ ಮಾಜಿ ಪತ್ರಕರ್ತ & ಹಾಲಿ ಸಂಸದ ಪ್ರತಾಪ್ ಸಿಂಹ ಅವರ ಹೆಸರು ಈಗ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ. ಇಷ್ಟೆಲ್ಲದರ ನಡುವೆ ಕರ್ನಾಟಕ ಕಾಂಗ್ರೆಸ್ ಕೂಡ ಸ್ಫೋಟಕ ಆರೋಪ ಮಾಡಿದ್ದು, ಸಂಚಲನ ಸೃಷ್ಟಿಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news




