ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ವಿಚಾರದಲ್ಲಿ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನ ಪರಿಷತ್ನಲ್ಲಿ ಪ್ರತಾಪ್ ಸಿಂಹ ನಾಯಕ್ ಕೆ. (ವಿಧಾನಸಭೆಯಿಂದ ಚುನಾಯಿತರಾದವರು) ಈ ಕುರಿತು ಕೇಳಿದ ಪ್ರಶ್ನೆಗೆ ಮಾನ್ಯ ಮುಖ್ಯಮಂತ್ರಿಗಳು ಉತ್ತರವನ್ನು ನೀಡಿದ್ದಾರೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನ ಪರಿಷತ್ನಲ್ಲಿ ಪ್ರತಾಪ್ ಸಿಂಹ ನಾಯಕ್ ಕೆ. (ವಿಧಾನಸಭೆಯಿಂದ ಚುನಾಯಿತರಾದವರು) ಈ ಕುರಿತು ಕೇಳಿದ ಪ್ರಶ್ನೆಗೆ ಮಾನ್ಯ ಮುಖ್ಯಮಂತ್ರಿಗಳು ಉತ್ತರವನ್ನು ನೀಡಿದ್ದಾರೆ. ಸದಸ್ಯರು ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಸೇವೆ ಕಲ್ಪಿಸುವ ಯೋಜನೆ ಜಾರಿಯಾಗಿದೆಯೇ? ಎಂದು ಕೇಳಿದ್ದರು. ಸದರಿ ಯೋಜನೆಯಡಿಯಲ್ಲಿ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ಸಿಗುವ ವೈದ್ಯಕೀಯ ಸೇವೆಗಳು ಮತ್ತು ಸೌಲಭ್ಯಗಳ ವಿವರಗಳೇನು? ಎಂದು ಪ್ರಶ್ನೆ ಮಾಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





